ಬೆಂಗಳೂರು: ಎರಡು ಕಟ್ಟಡಗಳ ನಿರ್ಮಾಣಕ್ಕಾಗಿ ಜ್ಞಾನಭಾರತಿ ಕ್ಯಾಂಪಸ್ ನಲ್ಲಿನ 419 ಮರಗಳಿಗೆ ಕೊಡಲಿ ಏಟು ನೀಡಲು ತಯಾರಿ ನಡೆಸಿದ್ದು, ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
419 ಮರಗಳ ನಾಶದ ವಿಚಾರ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ 419 ಮರ ಕಡಿಯೋದು ಎಷ್ಟು ಸರಿ? ಎಂದು ಈಗ ಎಲ್ಲರೂ ಪ್ರಶ್ನಿಸುತ್ತಿದ್ದಾರೆ. ಮತ್ತೊಂದು ಕಡೆ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮರಗಳನ್ನು ಕಡಿಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿವಿ ಹೇಳುತ್ತಿದೆ.
ಪಿಎಂ ಉಷಾ ಯೋಜನೆಯಡಿ ವಿವಿಯು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ರಿಸರ್ಚ್ ಬ್ಲಾಕ್ ಹಾಗೂ ಆಕಾಡೆಮಿಕ್ ಬ್ಲಾಕ್ ನಿರ್ಮಾಣಕ್ಕೆ ವಿವಿ ತಯಾರಿ ನಡೆಸಿದೆ. ಕೇಂದ್ರ ಸರ್ಕಾರದ ಒಟ್ಟು 100 ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಎರಡು ತಿಂಗಳ ಹಿಂದೆಯೇ ಗುದ್ದಲಿ ಪೂಜೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೆರವೇಸಿದ್ದರು. ಆದರೆ, ಇದೀಗ ಇದೀಗಾ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಟ್ಟಡ ನಿರ್ಮಾಣ ಕಾರಣವಾಗಿದೆ.
ಮರ ಕಡಿಯುವ ಬಗ್ಗೆ ಈಗಾಗಲೇ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮರಗಳನ್ನು ಕಡಿಯದಂತೆ ಪರಿಸರ ಪ್ರೇಮಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಮರ ಕಡಿಯದಂತೆ ಪರಿಸರ ಪ್ರೇಮಿಗಳು ಅಭಿಯಾನ ಹಮ್ಮಿಕೊಂಡಿದ್ದಾರೆ. ಈಗಾಗಲೇ 1 ಸಾವಿರಕ್ಕೂ ಅಧಿಕ ಜನರು ಮರ ಕಡಿಯದಂತೆ ಮನವಿ ಮಾಡಿದ್ದಾರೆ.