ಬೀದರ್ : ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾಧಿಕಾರಿಗಳು ಒಂದೇ ದಿನದಲ್ಲಿ 5 ಬಾಲ್ಯವಿವಾಹ ತಡೆಗಟ್ಟಿದ್ದಾರೆ.
ಅಧಿಕಾರಿಗಳ ತಂಡ ಫುಲ್ ಅಲರ್ಟ್ ಆಗಿದ್ದು ಒಂದೇ ದಿನ 5 ಬಾಲ್ಯ ವಿವಾಹವನ್ನು ತಡೆದಿದ್ದಾರೆ. ಬಸವಕಲ್ಯಾಣ ತಾಲೂಕಿನ ಘೋಟಾಳ ಗ್ರಾಮದಲ್ಲಿ 3, ಜೋಗೆವಾಡಿ ಹಾಗೂ ಕೌಡಿಹಾಳ ಗ್ರಾಮದಲ್ಲಿ ತಲಾ 1 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ.
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮದುವೆಗೆ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಗಾದಾ ನೇತೃತ್ವದಲ್ಲಿ ದಾಳಿ ನಡೆಸಿ, ಬಾಲ್ಯ ವಿವಾಹ ತಡೆಗಟ್ಟಲಾಗಿದೆ. ಈ ವೇಳೆ ಕುಟುಂಬಸ್ಥರಿಗೆ ಅಧಿಕಾರಿಗಳು ತಿಳುವಳಿಕೆ ನೀಡಿ ಮದುವೆಯನ್ನು ನಿಲ್ಲಿಸಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲಿ ಮದುವೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.