ಉಡುಪಿ ಜಿಲ್ಲೆಯಾದ್ಯಂತ ಭೀಕರವಾಗಿ ಮಳೆ ಸುರಿಯುತ್ತಿದ್ದು, ಅದರಲ್ಲೂ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ರಣ ಭೀಕರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಹಲವಾರು ಗ್ರಾಮಗಳು ಜಲದಿಗ್ಬಂಧನಕ್ಕೆ ತುತ್ತಾಗಿವೆ. ಪ್ರವಾಹಕ್ಕೆ ತುತ್ತಾಗಿರುವ ಹಳ್ಳಿಗಳ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿನ ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ, ಪಡುಕೋಣೆ, ಆನಗಳ್ಳಿ, ಹಳಗೇರಿ, ಬಿಜೂರು ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ ಜನ – ಜೀವನ ಅಸ್ತವ್ಯಸ್ಥವಾಗಿದೆ.
ಈ ಪ್ರದೇಶಗಳಲ್ಲಿ ಪ್ರತಿ ವರ್ಷವೂ ಮಳೆಗಾಲ ಬಂದರೆ ಸಾಕು ಈ ಸಮಸ್ಯೆ ತಪ್ಪುತ್ತಿಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ ಮನೆಯವರಿಗೆ ತಲೆನೋವು ಕಟ್ಟಿಟ್ಟ ಬುತ್ತಿ. ಸತತವಾಗಿ ಮಳೆ ಸುರಿದರೆ ಸಾಕು ಗ್ರಾಮದ ತುಂಬೆಲ್ಲ ನೀರು ಹೊಕ್ಕು ಬಿಡುತ್ತದೆ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು. ವೋಟು ಕೇಳಲು ಬರುವ ಜನಪ್ರತಿನಿಧಿಗಳು, ಮಳೆಗಾಲದಲ್ಲಿ ಉಂಟಾದ ಸಮಯಕ್ಕೆ ಬಂದು ವೀಕ್ಷಿಸಿ ಹೋದವರು ಮತ್ತೆ ಈ ಕಡೆ ತಲೆ ಹಾಕುವುದಿಲ್ಲ.
ಅಧಿಕಾರಿಗಳು ಮಳೆಗಾಲದ ಮೊದಲು ಬಂದು ಸ್ಥಳ ವೀಕ್ಷಿಸಿ, ಕ್ರಮ ಕೈಗೊಳ್ಳುತ್ತೇವೆ. ಯಾರು ಭಯಪಡಬೇಡಿ ಎಂದು ಹೇಳುತ್ತಾರೆ. ಆದರೆ, ನಮ್ಮ ಬದುಕು, ನೆಮ್ಮದಿ ಮಾತ್ರ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಲೇ ಇದೆಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳೀಯ ಯುವಕರು ಯುವಕರು ಮೀನುಗಾರರ ಶ್ರಮದಾನ…
ನಾವುಂದ, ಹಳಗೇರಿ, ಬಡಾಕೆರೆ, ಮರವಂತೆ, ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದಲೂ ಇಲ್ಲಿನ ಜನ ಪ್ರವಾಹಕ್ಕೆ ವಿರುದ್ಧವಾಗಿ ಈಜಿಯೇ ಬದುಕು ಕಟ್ಟಿಕೊಳ್ಳಬೇಕು. ಮಳೆಗಾದಲ್ಲಿ ಇಲ್ಲಿಗಾಗಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು.
ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ. ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿರುತ್ತದೆ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ಗೊತ್ತಿದ್ದವು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.
ಶಾಸಕ ಗಂಟಿಹೊಳೆ ಭೇಟಿ:
ಭಾರೀ ಮಳೆಯಿಂದಾಗಿ ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತ ಮುತ್ತ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನೆರೆಯ ಪರಿಣಾಮ ಹಲವು ಮನೆಗಳು, ಗದ್ದೆಗಳು ಜಲಾವೃತಗೊಂಡಿದ್ದು, ಸ್ಥಳಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ಮನೆಯವರನ್ನು ದೋಣಿ ಮೂಲಕ ಸ್ಥಳಾಂತರಿಸುವ ಕಾರ್ಯವಾಗುತ್ತಿದೆ.
ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕೂಡ ನೆರೆ ಪ್ರದೇಶಕ್ಕೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಅಧಿಕಾರಿಗಳು, ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು, ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ, ಕಂಬದಕೋಣೆ, ನಾವುಂದ, ಗ್ರಾಪಂ ಸಿಬ್ಬಂದಿ, ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸುತ್ತಿದ್ದಾರೆ.
[9:31 pm, 16/6/2025] Husband: ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ದಾವಣಗೆರೆ : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.
ಕಾಯ್ದೆಯ ಪ್ರಕಾರ ಮರುಗಣತಿ
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.