ಬೆಂಗಳೂರು: ಸಿಲಿಕಾನ್ ಸಿಟಿಯ ರೆವಿನ್ಯೂ ಸ್ವತ್ತುದಾರರಿಗೆ ಹಾಗೂ ಬಿಬಿಎಂಪಿಗೆ ಗುಡ್ ನ್ಯೂಸ್ ವೊಂದು ಸಿಕ್ಕಿದೆ. ಇನ್ನು ಮುಂದೆ ರೆವಿನ್ಯೂ ಸ್ವತ್ತುಗಳಿಗೂ ನಕ್ಷೆ ಮಂಜೂರಾತಿ ಭಾಗ್ಯ ಬಿಬಿಎಂಪಿ ಮೂಲಕ ಸಿಗಲಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಬಿಬಿಎಂಪಿ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ಆದಾಯ ಹರಿದು ಬರಲಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಇನ್ನು ಮುಂದೆ ರೆವಿನ್ಯೂ ಜಾಗದ ಭೂ ಪರಿವರ್ತನೆಯ ಪವರ್ ಬಿಬಿಎಂಪಿಗೆ ಸಿಗಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇಲ್ಲಿಯವರೆಗೆ ರೆವಿನ್ಯೂ ಸ್ವತ್ತುಗಳ ಭೂ ಪರಿವರ್ತನೆ ಅಧಿಕಾರ ಬಿಡಿಎಗೆ ಇತ್ತು. ಆದರೆ, ಇನ್ನು ಮುಂದೆ ಈ ಅಧಿಕಾರವನ್ನು ಸರ್ಕಾರವು ಬಿಬಿಎಂಪಿಗೆ ನೀಡಿದೆ. ಬಿ ಖಾತಾಗಳಿಗೆ ಕಟ್ಟಡ ಮಂಜೂರಾತಿ ನಕ್ಷೆ ಸಿಗುತ್ತಿರಲಿಲ್ಲ. ಈ ನಿಲುವು ಕೈಗೊಂಡಿರುವ ಸರ್ಕಾರವು ಈಗ ರೆವಿನ್ಯೂ ಜಾಗದ ಮಾಲೀಕರ ಸಂಕಷ್ಟ ದೂರ ಮಾಡಿದೆ. ಕನ್ವರ್ಷನ್ ಮಾಡಿ, ಸುಧಾರಣಾ ಶುಲ್ಕ ಪಾವತಿಸಿಕೊಂಡು ಪ್ಲ್ಯಾನ್ ಕೊಡಲು ಬಿಬಿಎಂಪಿಗೆ ಅವಕಾಶ ನೀಡಿದ್ದರಿಂದಾಗಿ ಬಿಬಿಎಂಪಿಗೆ ಸಾವಿರಾರು ಕೋಟಿ ರೂ. ಆದಾಯ ಹರಿದು ಬರಲಿದೆ.