ಬಾಗಲಕೋಟೆ: ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ತೆರಳಿದ್ದ ಯೋಧ ಸೇರಿ ಮೂವರು ಜಲಸಮಾಧಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಬಾದಾಮಿ (Badami) ತಾಲೂಕಿನ ಮಣ್ಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ (Malaprabha river) ಈ ಘಟನೆ ನಡೆದಿದೆ. ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ(15) ಹಾಗೂ ಗದಗ (Gadag) ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ(25) ಜಲಸಮಾಧಿಯಾಗಿರುವ ದುರ್ದೈವಿಗಳು.
ಶೇಖಪ್ಪ ಮುತ್ತಪ್ಪ ಮೂಲಿಮನಿ ನದಿಯಲ್ಲಿ ಸ್ನಾನ ಮಾಡಲು ಹೋಗಿ, ಮುಳುಗಿದ್ದ. ಈ ವೇಳೆ ರಕ್ಷಣೆಗಾಗಿ ಕೂಗಿದ್ದಾನೆ. ಆತನನ್ನು ರಕ್ಷಿಸಲು ಮಹಾಂತೇಶ ತೆರಳಿದಾಗ ಶೇಖಪ್ಪ ಗಾಬರಿಯಿಂದ ಮಹಾಂತೇಶ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದಿದ್ದಾನೆ. ಇದರಿಂದ ಮಹಾಂತೇಶ್ ಗೆ ಈಜು ಬಾರದೆ ಇಬ್ಬರೂ ನೀರಲ್ಲಿ ಮುಳುಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.