ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ.
ಬಿಸಿಲಿನ ಬೇಗೆಯಲ್ಲಿ ಬೆಂದಿರುವ ಜನತೆಗೆ ಮಳೆಯ ಮುನ್ಸೂಚನೆ ಅಲ್ಪ ಆಶಾಭಾವ ಮೂಡಿಸಿದೆ. ಬೆಂಗಳೂರು ಸೇರಿದಂತೆ, ಉತ್ತರ ಕರ್ನಾಟಕ, ಮತ್ತು ಮಧ್ಯ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬೆಂಗಳೂರಿನಲ್ಲೂ ಸಂಜೆ ಹೊತ್ತಿದೆ ದೊಡ್ಡ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಅಂತಾ ಹವಾಮಾನ ಇಲಾಖೆ ಹೇಳಿದೆ.
ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 5 ದಿನಗಳವರೆಗೂ ವರುಣಾರ್ಭಟ ಇರಲಿದೆ ಅಂತಾ ಮುನ್ಸೂಚನೆ ನೀಡಲಾಗಿದೆ.