ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಒಟ್ಟು ಘಟನೆಯಲ್ಲಿ 27 ಜನ ಅಭಿಮಾನಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪೈಕಿ ಬೌರಿಂಗ್ ಆಸ್ಪತ್ರೆಗೆ 7 ಜನ, ವೈದೇಹಿ ಆಸ್ಪತ್ರೆಗೆ ನಾಲ್ವರನ್ನು ಸಾವನ್ನಪ್ಪಿದ್ದಾರೆ. 19 ಮಂದಿ ಅಸ್ವಸ್ಥ ಅಭಿಮಾನಿಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ 7 ಜನ ಸಾವನ್ನಪ್ಪಿದ್ದಾರೆ. 8 ಜನರನ್ನು ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.