ಕರ್ನಾಟಕದಲ್ಲಿ ಸರ್ಕಾರಿ ಮನೆಗಳ ಹಂಚಿಕೆಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಡಿಯೋ ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ಸೃಷ್ಟಿಸಿದೆ.
ಈ ಬಗ್ಗೆ ಸರ್ಕಾರದ ವಿರುದ್ಧ ವಿಪಕ್ಷಗಳು ತಿರುಗಿ ಬಿದ್ದಿವೆ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಆಡಿಯೋ ಲೀಕ್ ಆಗಿರುವುದು ಆಶ್ಚರ್ಯನಾ? ನಿರಂತರವಾಗಿ ನಡೆಯುತ್ತಿದೆ. ಎಲ್ಲಾ ಇಲಾಖೆಯಲ್ಲೂ ನಡೆಯುತ್ತಿದೆ. ಬಿ. ಆರ್ ಪಾಟೀಲ್ ರಂತಹವರೇ ಹಿರಿಯರೇ ಇದರ ಬಗ್ಗೆ ಮಾತಾಡಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರದ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಕೃಷ್ಣ ಭೈರೇಗೌಡರೂ ಅವರೇ ಮಾತನಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.