ಸುರಿಯೋ ಮಳೆಯಲ್ಲಿ ಪ್ರವಾಸಿಗರ ಮೋಜು ಮಸ್ತಿ ವಾಹನ ಸವಾರರನ್ನು ಹೈರಾಣಾಗಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟಿಯ ನಡು ರಸ್ತೆಯಲ್ಲೇ ಪ್ರವಾಸಿಗರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಈ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ಪಕ್ಕದಲ್ಲೇ ದೈತ್ಯ ಕಂದಕವಿದೆ. ಇಂತಹ ರಸ್ತೆಯಲ್ಲೇ, ಪ್ರವಾಸಿಗರು ಸಂಚಾರಕ್ಕೆ ಅಡ್ಡಿಯಾಗುವಂತೆ ಡ್ಯಾನ್ಸ್ ಮಾಡಿದ್ದಾರೆ. ಪರಿಣಾಮ ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಬಣಕಲ್-ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸೋ ನೂರಾರು ಪ್ರಯಾಣಿಕರು ಪರದಾಡುವಂತಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆ.