ಉಡುಪಿ: ಪತ್ನಿ (Wife) ಯಾವಾಗಲೂ ಮೊಬೈಲ್ (Mobile) ನಲ್ಲೇ ಮುಳುಗಿರುತ್ತಾಳೆಂದು ಪತಿ (Husband) ಹತ್ಯೆ (Murder) ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಉಡುಪಿಯ(Udupi) ಬ್ರಹ್ಮಾವರ (Brahmavar) ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ. ರೇಖಾ(27) ಕೊಲೆಯಾಗಿರುವ ದುರ್ದೈವಿ. ಗಣೇಶ ಪೂಜಾರಿ (42) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ತಾಯಿ ಕೊಲೆಯಾಗಿದ್ದು, ತಂದೆ ಜೈಲು ಪಾಲಾಗಿದ್ದಾನೆ. ಪರಿಣಾಮ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೆಲಸ ಮಾಡುತ್ತಿದ್ದ ಗಣೇಶ್ ಪೂಜಾರಿ ಹಾಗೂ ರೇಖಾ ಮಧ್ಯೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ರೇಖಾ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಗಣೇಶ್ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತೆರಳಿ ಕತ್ತಿಯಿಂದ ಪತ್ನಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪತ್ನಿ ಕೊಲೆಯಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.