ಬೆಂಗಳೂರು: ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಇದೆಲ್ಲ ಕೇಂದ್ರದ ಮಟ್ಟದಲ್ಲಿ ಚರ್ಚೆ ಆಗುವ ವಿಚಾರ. ನಮ್ಮ ಹಂತದಲ್ಲಿ ಚರ್ಚೆ ಆಗಲ್ಲ. ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ಯಾರು ಯಾರು ಬರುತ್ತಾರೋ ಅವರು ಮರಳಿ ಪಕ್ಷಕ್ಕೆ ಬರಬಹುದು ಎಂದು ಆಹ್ವಾನ ನೀಡಿದ್ದಾರೆ.
ದೆಹಲಿಯಲ್ಲಿ ವರಿಷ್ಠರು ಕೂತು ಇದರ ಬಗ್ಗೆ ಚರ್ಚೆ ಮಾಡುತ್ತಾರೆ. ಇಲ್ಲಿಯವರೆಗೂ ಈ ವಿಚಾರ ಚರ್ಚೆಗೆ ಬಂದಿಲ್ಲ. ಪಕ್ಷ ಬಿಟ್ಟವರು ತಮ್ಮ ತಪ್ಪು ಅರ್ಥ ಮಾಡಿಕೊಂಡಿದ್ದರೆ ಪಕ್ಷಕ್ಕೆ ವಾಪಸ್ ಆಗಬಹುದು ಎಂದು ಕರೆ ಕೊಟ್ಟಿದ್ದಾರೆ.