ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆಗಳ ಹಂಚಿಕೆ ವಿಷಯದಲ್ಲಿ ಅಕ್ರಮ ನಡೆಯುತ್ತಿದೆ. ಹಣ ನೀಡಿ ಮನೆ ಪಡೆದುಕೊಳ್ಳಲಾಗುತ್ತಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರಾಜ್ ಖಾನ್ ಜೊತೆ ನಡೆಸಿದ ಫೋನ್ ಸಂಭಾಷಣೆಯಲ್ಲಿ ಬಹಿರಂಗಗೊಂಡಿದ್ದು ಆಡಿಯೋ ಕ್ಲಿಪ್ಪಿಂಗ್ ವೈರಲ್ ಆಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪಾಟೀಲ್, ತಾನು ಸರ್ಫರಾಜ್ ಜೊತೆ ಮಾತನಾಡಿರುವುದು ನಿಜ. ಸಿಎಂ ಕರೆದರೆ ಹೋಗಿ ಮಾತಾಡಲು ಸಿದ್ಧನಿದ್ದೇನೆ ಎಂದಿದ್ದಾರೆ.
ಹೇಳಬೇಕಾಗಿದ್ದೆಲ್ಲವನ್ನು ಹೇಳಿದ್ದೇನೆ. ಭ್ರಷ್ಟಾಚಾರ ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆಯುತ್ತದೆ. ಅದರೆ ಕಾಂಗ್ರೆಸ್ ಜನಪರ ಆಡಳಿತ ನೀಡುವ ಭರವೆಯೊಂದಿಗೆ ಅಧಿಕಾರಕ್ಕೆ ಬಂದಿರುವುದರಿಂದ ಹೀಗೆಲ್ಲ ಆಗಬಾರದಿತ್ತು ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ.