ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಗೂ ನಮ್ಮ ನಾಯಕರು ಗೃಹ ಸಚಿವ ಅಮಿತ್ ಶಾರನ್ನು ನಿನ್ನೆ ಭೇಟಿ ಮಾಡಿ ಚರ್ಚೆ ಮಾಡಿದೆವು. ಸುಮಾರು ಹಲವು ಗಂಟೆಗಳ ಕಾಲ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ರಾಜ್ಯದ ಪ್ರಸಕ್ತ ವಿಚಾರಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ನಾನು ಸೇರಿದಂತೆ ಹಲವು ನಾಯಕರು ಈ ವೇಳೆ ಭಾಗವಹಿಸಿದ್ದೆವು. ಕಾಂಗ್ರೆಸ್ ಸರ್ಕಾರ ಒಡೆದಾಳುವ ನೀತಿ ಅನುಸರಿಸುತ್ತಿದೆ.
ಬಡವರಿಗೆ, ರೈತರಿಗೆ ಈ ಸರ್ಕಾರ ಶಾಪವಾಗಿದೆ. ಬರುವ ದಿನಗಳಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯ ಅವಕಾಶ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಎಲ್ಲರೂ ವೈಷಮ್ಯ ಮರೆತು ಕೆಲಸ ಮಾಡುವಂತೆ ಕರೆ ನೀಡಿದ್ದಾರೆ. ಹಳೆಯದನ್ನೆಲ್ಲ ಮರೆತು ಒಟ್ಟಾಗಿ ಹೋಗುವಂತೆ ತಿಳಿ ಹೇಳಿದ್ದಾರೆ ಎಂದಿದ್ದಾರೆ.