ಯಾದಗಿರಿ: ಸವರ್ಣೀಯರಿಂದ ಕಾನೂನು ವಿದ್ಯಾರ್ಥಿಗೆ ಜಾತಿ ನಿಂದನೆ ಮಾಡಿರುವ ಆರೋಪವೊಂದು ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿ ದುರ್ಗಪ್ಪ ಹೊಸಮನಿ ದೂರಿನನ್ವಯ ಸದ್ಯ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿ ನಿಂದನೆ ಮಾಡಿದ ಮಲ್ಲಯ್ಯ ಹುಲಕಲ್ ಹಾಗೂ ಅರ್ಜುನ್ ದಿವಡಿ ಎಂಬುವವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ನಡು ರಸ್ತೆಯಲ್ಲಿ ಅಡ್ಡಗಟ್ಟಿ ಜಾತಿ ನಿಂದನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.