ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ನಡೆದಿದೆ.
ಲಾರಿ ಪಲ್ಟಿಯಾದ ಪರಿಣಾಮ ಐದಾರು ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸಪಟ್ಟರು. ನಿನ್ನೆ ಇದೇ ಸ್ಥಳದಲ್ಲಿ ಒಂದು ಲಾರಿ ಪಲ್ಟಿಯಾಗಿತ್ತು.
ಇಂದು ಅದೇ ಸ್ಥಳದಲ್ಲಿ ಮತ್ತೊಂದು ಲಾರಿ ಪಲ್ಟಿಯಾಗಿ ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಅವೈಜ್ಞಾನಿಕ ಕಾಮಗಾರಿ ಲಾರಿ ಪಲ್ಟಿಯಾಗಿದೆ ಎಂದು ಆರೋಪಿಸಲಾಗಿದೆ.