ಧಾರವಾಡ : ವಿದ್ಯುತ್ ತಂತಿ ತಗುಲಿ ಹಸು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ.
ಚನ್ನಬಸಯ್ಯ ಬೆಳ್ಳಿಗಟ್ಟಿ ಎಂಬುವವರಿಗೆ ಸೇರಿದ ಹಸು ಸಾವನ್ನಪ್ಪಿದ್ದು, ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ ಪಾರ್ಮರ್ ಹತ್ತಿರ ಕೆಳಗೆ ಇದ್ದ ತಂತಿ ತಗುಲಿ ಸಾವನ್ನಪ್ಪಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಸು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಕೇಳಗೆ ಬಿದ್ದ ತಂತಿ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಹಲವು ದಿನಗಳಿಂದ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಈ ದುರ್ಘಟನೆ ನಡೆದಿದೆ. ಕೂಡಲೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.