ಬೆಂಗಳೂರು: ಬಿಜೆಪಿ ಮಾಡಿದ್ದ ಟ್ವೀಟ್ ವಿರೋಧಿಸಿ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಆಗಿಮಿಸಿದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂದೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರ ವಿಷಯವಾಗಿ ನಿನ್ನೆ ಬಿಜೆಪಿ ರಾಜ್ಯ ಘಟಕದ ವತಿಯಿಂದ ಟ್ವೀಟ್ ಮಾಡಲಾಗಿತ್ತು.
ಇಂದಿರಾಗಾಂಧಿ ಅವರ ಆಡಳಿತ ಕಾರ್ಯವೈಖರಿ ಉಲ್ಲೇಖಿಸಿ, ಹಿಟ್ಲರ್ ಇಂದಿರಾಗಾಂಧಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಬಿಜೆಪಿಯ ಟ್ವೀಟ್ ಹಿನ್ನೆಲೆಯಲ್ಲಿ, ಇಂದು ಜಗನ್ನಾಥ ಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಆಗಮನದ ಬೆನ್ನಲ್ಲೇ ಬಿಜೆಪಿ ಕಚೇರಿಗೆ ಬಿಗಿಯಾದ ಬಂದೋಬಸ್ತ್ ಕಲ್ಪಿಸಲಾಗಿದೆ.