ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರೆದಿದೆ.
ಹಾಸನ ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಸುಪ್ರಿಯಾ (22) ಹೃದಯಾಘಾತಕ್ಕೆ ಬಲಿಯಾಗಿರುವ ಯುವತಿ ಎನ್ನಲಾಗಿದೆ. ಹೃದಯಾಘಾತಕ್ಕೆ ಬಲಿಯಾಗಿರುವ ಯುವತಿಯನ್ನು ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದವರು ಎನ್ನಲಾಗಿದೆ.
ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿ ಪುತ್ರಿ ಸುಪ್ರಿತಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದರು. ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದರು. ವಿದ್ಯಾಭ್ಯಾಸದೊಂದಿಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಆದರೆ, ನಿನ್ನೆ ಮನೆಯಲ್ಲಿದ್ದ ಸಂದರ್ಭದಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ ಎಂದು ಕುಸಿದು ಬಿದ್ದಿದ್ದಾರು. ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಹದಿನಾಲ್ಕು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಸಾವುಗಳು ಜನರಲ್ಲಿ ಆತಂಕ ಮೂಡಿಸುತ್ತಿವೆ.