ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಾಗ್ವಾದ, ಗದ್ದಲ ನಡೆದಿರುವ ಘಟನೆ ನಡೆದಿದೆ.
ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ನೂಕಾಟ, ತಳ್ಳಾಟ, ಗದ್ದಲ ನಡೆದಿದೆ. ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೂ ಜಗಳ ಹೋಗಿತ್ತು ಎನ್ನಲಾಗಿದೆ. ಯೂತ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್ ಗೌಡ, ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಈ ಕಾರ್ಯಕ್ರಮದಲ್ಲಿ ಇದ್ದ ವೇಳೆಯೇ ಗಲಾಟೆ ನಡೆದಿದೆ.
ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರ ಬಣಗಳ ನಡುವೆ ಭಿನ್ನಮತ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪದಗ್ರಹಣ ಕಾರ್ಯಕ್ರಮದಲ್ಲಿ ಹಿಂದಿನ ಪದಾಧಿಕಾರಿಗಳು, ನಿಕಟಪೂರ್ವ ಅಧ್ಯಕ್ಷರಿಗೆ ಆಹ್ವಾನ ನೀಡಿಲ್ಲ ಎಂದು ಹಲವರು ಬೇಸರ ವ್ಯಕ್ತಪಡಿಸಿದರು. ಈ ವಿಚಾರ ಗಲಾಟೆಯಾಗುವ ಮುಟ್ಟಕ್ಕೆ ಹೋಗಿದೆ ಎನ್ನಲಾಗಿದೆ.