ಚಾಮರಾಜನಗರ: ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ತನಿಖೆಗೆ ಆಗ್ರಹಿಸಿದೆ. ಆದರೆ, ಉನ್ನತ ಮಟ್ಟದ ತನಿಖಾ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.
ತನಿಖಾ ತಂಡದ ಮುಖ್ಯಸ್ಥರಾಗಿ ಪಿಸಿಸಿಎಫ್ ರವಿ ಬದಲು ಎಪಿಸಿಸಿಎಫ್ ಕುಮಾರ್ ಪುಷ್ಕರ್ ನೇಮಕ ಮಾಡಲಾಗಿದೆ. ಪಿಸಿಸಿಎಫ್ ರವಿ ಕೋರಿಕೆ ಮೇರೆಗೆ ತನಿಖಾತಂಡದ ಮುಖ್ಯಸ್ಥ ಸ್ಥಾನದಲ್ಲಿ ಬದಲಾವಣೆ ಮಾಡಲಾಗಿದೆ.
ತನಿಖಾ ತಂಡದಲ್ಲಿ ಮತ್ತೊಬ್ಬ ಎಪಿಸಿಸಿಎಫ್ ಶ್ರೀನಿವಾಸಲು, ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ ಹೀರಾಲಾಲ್, ಎನ್ಟಿಸಿಎ ಪ್ರತಿನಿಧಿ ಮಲ್ಲೇಶಪ್ಪ, ವನ್ಯಜೀವಿ ತಜ್ಞ ಡಾ. ಸಂಜಯ್ಗುಬ್ಬಿ, ಮೈಸೂರು ಮೃಗಾಲಯದ ಪಶುವೈದ್ಯಾಧಿಕಾರಿ ಶಶಿಧರ್ ನೇಮಕ ಮಾಡಲಾಗಿದೆ.