ಚಿತ್ರದುರ್ಗ: ಭದ್ರಾ ನೀರಿಗಾಗಿ ಒತ್ತಾಯಿಸಿ ಇಂದು ಹೊಸದುರ್ಗ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮತ್ತು ರೈತ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ.
ದಾವಣಗೆರೆ ರೈತರು ಭದ್ರಾ ನೀರು ಬಿಡುಗಡೆಗೆ ವಿರೋಧಿಸಿರುವ ಹಿನ್ನೆಲೆಯಲ್ಲಿ ಹೊಸದುರ್ಗ ಬಂದ್ ಗೆ ಕರೆ ನೀಡಲಾಗಿದೆ. ಬೆಳ್ಳಂ ಬೆಳಿಗ್ಗೆಯಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ಘೋಷಿಸಲಾಗಿದೆ.
ಹೀಗಾಗಿ ಬೀದಿ ಬದಿಯ ವ್ಯಾಪಾರ ವಹಿವಾಟು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಕೂಡ ನೀಡಲಾಗಿದೆ. ಆಟೋ ಚಾಲಕರು, ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದಾರೆ. ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಯಿತು. ನಂತರ ಮೆರವಣಿಗೆ ತಾಲೂಕು ಕಚೇರಿಯವರೆಗೂ ಸಾಗಿತು.