ಹಾಸನ: ಹೇಮಾವತಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಟ್ಟ ಹಿನ್ನಲೆಯಲ್ಲಿ ನದಿ ತೀರದ ಕೆಲವು ಪ್ರದೇಶಗಳಲ್ಲಿ ನೆರೆ ಸೃಷ್ಟಿಯಾಗಿದೆ.
ಅಲ್ಲದೇ, ಹೊಳೆನರಸೀಪುರ ಪಟ್ಟಣದಲ್ಲಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ನೀರು ನುಗ್ಗಿದ ಹಿನ್ನಲೆಯಲ್ಲಿ ಕೆಲವು ಕುಟುಂಬಗಳನ್ನು ನಿರ್ಮಿತಿ ಕೆಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ನೆರೆ ಪೀಡಿತ ಪ್ರದೇಶ ಹಾಗೂ ನಿರ್ಮಿತಿ ಕೇಂದ್ರಗಳಿಗೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ನಿರ್ಮಿತಿ ಕೇಂದ್ರದಲ್ಲಿರುವವರ ಪರಿಸ್ಥಿತಿ ವಿಚಾರಿಸಿದ್ದಾರೆ. ನಿರ್ಮಿತಿ ಕೇಂದ್ರದಲ್ಲಿದ್ದ ಮಗುವೊಂದನ್ನು ಎತ್ತಿ ಸಂಸದರು ಮುದ್ದಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನೆರೆ ಹಾವಳಿಯಿಂದಾಗಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದು ಶ್ರೇಯಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.