ದಾವಣಗೆರೆ: ಬೈಕ್ ರ್ಯಾಲಿ ವೇಳೆ ಸ್ಕಿಡ್ ಆಗಿ ಮಾಜಿ ಸಚಿವ ರೇಣುಕಾಚಾರ್ಯ ಗಾಯಗೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ಮಹಾನಗರ ಪಾಲಿಕೆ ಕಚೇರಿ ಬಳಿಯ ಕೆಳಸೇತುವೆ ಬಳಿ ಈ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ರೇಣುಕಾಚಾರ್ಯ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿಗೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿ ಮೂಲಕ ಜನರಿಗೆ ಸಹಕರಿಸುವಂತೆ ಕೋರುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ. ದಾವಣಗೆರೆಯ ಹಳೆಯ ಪ್ರವಾಸ ಮಂದಿರದಿಂದ ಬೈಕ್ ರ್ಯಾಲಿ ಆರಂಭವಾಗಿತ್ತು. ಮೊದಲು ರೇಣುಕಾಚಾರ್ಯ ಬುಲೆಟ್ ಏರಿ ರ್ಯಾಲಿಯಲ್ಲಿ ಭಾಗವಹಿಸಿದ್ದುರ.
ಆನಂತರ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಕಣ್ಣಿನ ಭಾಗ, ಕೈ, ಕಾಲಿಗೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.