ಚಾಮರಾಜನಗರ: ಮಲೆಹದೇಶ್ವರ ವನ್ಯಧಾಮದ ಡಿಸಿಎಫ್ ಚಕ್ರಪಾಣಿ ಎಡವಟ್ಟು ಈಗ ಒಂದೊಂದಾಗಿ ಬಯಲಾಗುತ್ತಿದೆ.
ಡಿಸಿಎಫ್ ಚಕ್ರಪಾಣಿ ವಿರುದ್ಧ ಸರ್ಕಾರಿ ವಾಹನ ದುರ್ಬಳಕೆ ಆರೋಪ ಕೇಳಿ ಬಂದಿದೆ. ಹುಲಿಗಳ ಹತ್ಯೆ ಪ್ರಕರಣ ನಂತರ ಸಾಮಾಜಿಕ ಜಾಲತಾಣಗಳಲ್ಲಿ ವಾಹನ ದುರ್ಬಳಕೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಮಲೆ ಮಹದೇಶ್ವರ ವನ್ಯಧಾಮಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಡಿಸಿಎಫ್ ಎಡವಟ್ಟು ಮಾಡಿಕೊಂಡಿದ್ದಾರೆ.
ತಮ್ಮ ಪತ್ನಿ ಹಾಗೂ ಮಗನನ್ನು ಬೆಂಗಳೂರಿಗೆ ಕಳುಹಿಸಲು ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ವೇಳೆ ರೆಡ್ ಹ್ಯಾಂಡ್ ಆಗಿ KRS ಪಕ್ಷದ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದಾರೆ. ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡ ಬಗ್ಗೆ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.
ಆಗ ಡಿಸಿಎಫ್ ಚಕ್ರಪಾಣಿ ಅವರು ಪಿಸಿಸಿಎಫ್ ನೋಡಲು ಬಂದಿದ್ದೇನೆಂದು ಉತ್ತರ ನೀಡಿದ್ದಾರೆ. ಹೆಂಡತಿ ಹಾಗೂ ಮಗನನ್ನು ಸರ್ಕಾರಿ ವಾಹನದಲ್ಲಿ ಕಳಿಸಿರುವ ಕುರಿತು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪ್ರಶ್ನಿಸಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.