ಬಾಗಲಕೋಟೆ: ಚೀಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ವೀರಾಪೂರ ಪುನರ್ವಸತಿ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಆಗಷ್ಟೇ ಹುಟ್ಟಿದ ಮಗುವನ್ನು ಚೀಲದಲ್ಲಿ ಹಾಕಿ ನೀಚ ತಾಯಿ ಬಿಟ್ಟು ಹೋಗಿದ್ದಾಳೆ. ಮಗು ಅಳುವ ಶಬ್ದ ಕೇಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಹೆರಿಗೆ ನಂತರ ಹೆಣ್ಣು ಮಗು ಎಂದು ಗೊತ್ತಾಗಿ ಮಗುವನ್ನು ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣು ಮಗುವನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.