ಬೆಂಗಳೂರು: ಬಿಎಂಟಿಸಿ ಬಸ್ ಹರಿದ ಪರಿಣಾಮ ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿನ ಟಾಟಾ ಇನ್ಸ್ ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ.
ಬೈಕ್ ಸವಾರ ಪೂರ್ತಿಯಾದ ಹೆಲ್ಮೆಂಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಸಾವನ್ನಪ್ಪಿದ ಬೈಕ್ ಸವಾರ. ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಯಲಹಂಕದಿಂದ ಯಶವಂತಪುರಕ್ಕೆತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಾರ್ ಗೆ ಬೈಕ್ ಟಚ್ ಆದ ಪರಿಣಾಮ ಬೈಕ್ ಸವಾರ ಈಶ್ವರ್ ಕೆಳಗೆ ಬಿದ್ದಿದ್ದಾರೆ. ಆಗ ಈಶ್ವರ್ ತಲೆ ಮೇಲೆ ಬಸ್ ನ ಹಿಂದಿನ ಚಕ್ರ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಂಪುಬಣ್ಣದ ಹೆಲ್ಮೆಟ್ ಒಳಗೆ ಬೈಕ್ ಸವಾರ ತಲೆ ಛಿದ್ರವಾಗಿದ್ದು, ಘಟನಾ ಸ್ಥಳದಲ್ಲೇ ಈಶ್ವರ್ ಹೆಲ್ಮೆಟ್, ಶೂ ಬಿದ್ದಿದೆ.
ಸಾವನ್ನಪ್ಪಿರುವ ಈಶ್ವರ್ ವಿದ್ಯಾರಣ್ಯಪುರ ನಿವಾಸಿಯಾಗಿದ್ದು, ಚಿನ್ನ, ಬೆಳ್ಳಿಯ ವ್ಯಾಪಾರ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹೆಂಡತಿಯೊಂದಿಗೆ ವಾಸವಾಗಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.