ಕೊಪ್ಪಳ: ಜಿಲ್ಲೆಯಲ್ಲಿ ಹಾಡುಹಗಲೇ ಭೀಕರ ಕೊಲೆ ನಡೆದಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಬಳಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸುಮಾರು 32 ವರ್ಷದ ಯುವಕ ನಾಗರಾಜ್ ಬೂದನೂರ ಕೊಲೆಯಾಗಿರುವ ವ್ಯಕ್ತಿ. ವೆಂಕಟಗಿರಿ ಜಮೀನೊಂದರಲ್ಲಿ ಹಂತಕರು ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ನಾಗರಾಜ್ ಗಂಗಾವತಿ ತಾಲೂಕಿನ ವಿಠ್ಠಲಾಪೂರ ಗ್ರಾಮದ ನಿವಾಸಿ ಎನ್ನಲಾಗಿದೆ.
ಅನೈತಿಕ ಸಂಬಂಧದಿಂದಾಗಿ ಕೊಲೆಯಾಗಿದೆ. ಸಿದ್ದರಾಮೇಶ್ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಹನುಮಂತನ ಹೆಂಡತಿಯೊಂದಿಗೆ ಕೊಲೆಯಾದ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಕುರಿತು ಎರಡ್ಮೂರು ಬಾರಿ ಕನಕಗಿರಿ ಪೊಲೀಸ್ ಠಾಣೆಯಲ್ಲಿ ರಾಜಿಯಾದರೂ ಮಾತು ಕೇಳದ ಹಿನ್ನಲೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೇ, ಮತ್ತೋರ್ವ ಆರೋಪಿ ಸಿದ್ದರಾಮೇಶ್ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.