ಕುಡಿದ ಮತ್ತಿನಲ್ಲಿ ಎರಡು ಗುಂಪಿನ ಸದಸ್ಯರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪಟ್ಟಣದ ಮೌರ್ಯ ಬಾರ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದೆ. ಎರಡೂ ಕಡೆಯವರು ಪರಸ್ಪರ ದೂರು ದಾಖಲಿಸಿದ್ದಾರೆ.
ತೀವ್ರವಾಗಿ ಗಾಯಗೊಂಡವರನ್ನು ಕ್ಲ್ಯಾರೆನ್ಸ್ ಪಿಂಟೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸದಸ್ಯರ ಎರಡು ಗುಂಪು ಬಾರ್ ನಲ್ಲಿ ಮದ್ಯ ಸೇವಸಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಮತ್ತು ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.