ಕಾಫಿನಾಡಿನಲ್ಲಿ ಬಿರುಗಾಳಿ ಮಳೆ ಆರ್ಭಟ ಮುಂದುವರೆದಿದ್ದು, ಬಿರುಗಾಳಿ ಮಳೆ ಆರ್ಭಟಕ್ಕೆ ಬೃಹತ್ ಗಾತ್ರದ ಮರ ವೊಂದು ಧರೆಗುರುಳಿದೆ. ಚಿಕ್ಕಮಗಳೂರು ತಾಲೂಕಿನ ಕೈಮರ ಸಮೀಪದ ಚಂದ್ರಿಕಾ ಎಸ್ಟೇಟ್ ಬಳಿ ಈ ಘಟನೆ ನಡೆದಿದೆ. ಮರಬಿದ್ದ ರಭಸಕ್ಕೆ ಮೂರು ವಿದ್ಯುತ್ ಕಂಬ ಪುಡಿಪುಡಿಯಾಗಿವೆ.
ಹೀಗಾಗಿ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಚಾರ ಬಂದ್ ಮಾಡಲಾಗಿದೆ. ಪ್ರವಾಸಿಗರನ್ನು ವಾಪಾಸ್ ಕಳುಹಿಸಲಾಗುತ್ತಿದೆ. ಹೀಗಾಗಿ ಪ್ರವಾಸಿಗರು, ಸ್ಥಳೀಯರು ಪರದಾಟ ನಡೆಸುವಂತಾಗಿದೆ.