ಬಂಗಾರಪೇಟೆ ಬಿಜೆಪಿ ನಾಯಕ ಕೆ.ಚಂದ್ರಾರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿನ ಡಿಸಿಎಂ ನಿವಾಸದಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ಕಳೆದ ಬಾರಿ ಎಂಎಲ್ ಸಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆನಂತರ ಕೆ.ಚಂದ್ರಾರೆಡ್ಡಿ ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದರು. ಶಾಸಕ ನಾರಾಯಣಸ್ವಾಮಿ ಚಂದ್ರಾರೆಡ್ಡಿ ಅವರನ್ನು ತಮ್ಮತ್ತ ಸೆಳೆದಿದ್ದು, ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದಾರೆ.