ನಿರಂತರ ಧಾರಾಕಾರ ಮಳೆಗೆ ಎಡಮಾವಿನ ಹೊಳೆ ತುಂಬಿ ಹರಿಯುತ್ತಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಉಡುಪಿ ಬೈಂದೂರು ತಾಲೂಕಿನ ಹಳಗೇರಿ ಗ್ರಾಮದಲ್ಲಿ ನೆರೆ ಸೃಷ್ಟಿಯಾಗಿದೆ. ಏಕಾಏಕಿ ಗ್ರಾಮದೊಳಗೆ ಹೊಳೆನೀರು ನುಗ್ಗಿದೆ. ಮಳೆಯಿಂದಾಗಿ ಗ್ರಾಮದಲ್ಲಿನ ಸುಮಾರು 10ಕ್ಕೂ ಅಧಿಕ ಮನೆಗಳು ಭಾಗಶಃ ಮುಳುಗಡೆಯಾಗಿವೆ. ಹೀಗಾಗಿ ದೋಣಿಗಳ ಮೂಲಕ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾಲ್ಬುಡ, ಬಿಜೂರು, ನಾಗೂರು ಪ್ರದೇಶದಸಲ್ಲಿ ಆತಂಕ ಸೃಷ್ಟಿಯಾಗಿದೆ.