ಬೆಳಗಾವಿ: ಮಹಿಳೆಯೊಬ್ಬರು ಬಾಗಿನ ಅರ್ಪಿಸಲು ಹೋಗಿ ಕೃಷ್ಣೆಯ ಪಾಲಾಗಿರುವ ಘಟನೆ ನಡಿದದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ(Manjari) ಗ್ರಾಮದ ಬಳಿ ಹರಿಯುತ್ತಿರುವ ಕೃಷ್ಣಾ ನದಿ (Krishna River)ಗೆ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಬಾಗಿನ ಅರ್ಪಿಸಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರು ಪಾಲಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳವು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.