ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ಮೈಮುಟ್ಟಿ ಅನುಚಿತ ವರ್ತನೆ ಮಾಡಿದ್ದ ಕಾಮುಕ ಶ್ರೀಕಾಂತ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಶ್ರೀಕಾಂತ್, ಕಾಡುಬೀಸನಹಳ್ಳಿಯಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿತ್ತು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ. ಯುವತಿ ಮುಟ್ಟಿ ಅನುಚಿತ ವರ್ತನೆ ತೋರಿದ್ದ. ಈ ಕುರಿತು ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೇಸ್ ದಾಖಲಿಸಿ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದರು. ಈ ಕುರಿತು ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ಮಾಡಿದ್ದರು. ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.