ಡೆಹ್ರಾಡೂನ್: ಬಿಜೆಪಿ ನಾಯಕರೊಬ್ಬರ ವಿರುದ್ಧ ಅತ್ಯಾಚಾರ ಹಾಗೂ ಕೊಲೆ ಆರೋಪ ಕೇಳಿ ಬಂದಿದೆ.
ಹರಿದ್ವಾರದಲ್ಲಿ 13 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉತ್ತರಾಖಂಡದ ಬಿಜೆಪಿ (BJP) ನಾಯಕ ಆದಿತ್ಯ ರಾಜ್ ಸೈನಿ (Aditya Raj Saini) ಬಂಧಿಯಾಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಮೂರು ದಿನಗಳ ಹಿಂದೆ ಬಾಲಕಿ ನಾಪತ್ತೆಯಾಗಿದ್ದಳು. ಆದರೆ, ಬಾದಕಿಯ ಶವ ಮಂಗಳವಾರ ಪತಂಜಲಿ ಸಂಶೋಧನಾ ಕೇಂದ್ರದ ಹತ್ತಿರ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯ ತಾಯಿಯು ಬಿಜೆಪಿ ನಾಯಕ ಹಾಗೂ ಆತನ ಸಹಚರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈಗ ಮೃತ ಬಾಲಕಿಯ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಡಿ ಅವರನ್ನು ಬಂಧಿಸಲಾಗಿದೆ.