ಬಾಗಲಕೋಟೆ: ಜಿಲ್ಲೆಯ ರಬಕವಿ- ಬನಹಟ್ಟಿ (Rabakavi Banahatti) ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಜನರಿದ್ದ ಶೆಡ್ ಗಳನ್ನು ತೆರವುಗೊಳಿಸಿರುವ ಘಟನೆ ನಡೆದಿದೆ.
ಪಟ್ಟಣದ ವಾರ್ಡ್ ನಂಬರ್ 13 ಕೆಂಗೇರಿ ಮಡ್ಡಿಯಲ್ಲಿ ಈ ಘಟನೆ ನಡೆದಿದೆ. ಐದಾರು ವರ್ಷಗಳಿಂದ ಕೆಲ ಕುಟುಂಬಸ್ಥರು ಪಟ್ಟಣದ ಕೆಂಗೇರಿ ಮಡ್ಡಿಯ ಆಶ್ರಯ ಕಾಲೋನಿಯಲ್ಲಿ ವಾಸಿಸುತ್ತಿದ್ದರು. ಆದರೆ, ಇಂದು ಬೆಳಗ್ಗೆ ಏಕಾಏಕಿ ಪುರಸಭೆ ಹಾಗೂ ತಹಸೀಲ್ದಾರ್ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಯಾವುದೇ ರೀತಿಯ ಸೂಚನೆ ನೀಡದೇ, ನೋಟಿಸ್ ಕೊಡದೇ ಏಕಾಏಕಿ ತೆರವು ಕಾರ್ಯಾಚರಣೆ ಮಾಡಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ