ಬೆಂಗಳೂರು: ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಅರೆಸ್ಟ್ ಆಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಐಶ್ವರ್ಯಾ ಗೌಡ ಪರ ವಾದ ಮಂಡಿಸಿದ್ದ ವಕೀಲ ಎಸ್. ಸುನೀಲ್ ಅವರು, ಅನುಸೂಚಿತ ಪ್ರಕರಣವಲ್ಲದಿದ್ದರೂ ಇ.ಡಿ ಅಧಿಕಾರಿಗಳು ಐಶ್ವರ್ಯಾ ಗೌಡರನ್ನು ಬಂಧಿಸಿದ್ದಾರೆ. ಹೀಗಾಗಿ ಬಂಧನದಿಂದ ವಿನಾಯಿತಿ ನೀಡಬೇಕು ಎಂದು ವಾದಿಸಿದರು. ಆದರೆ, ವಾದ-ವಿವಾದ ಆಲಿಸಿದ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರೂ ಮಾಡಿದೆ.
ಡಿ. ಕೆ. ಸುರೇಶ್ ನನ್ನ ಸಹೋದರ ಎಂದು ಹೇಳಿದ್ದ ಐಶ್ವರ್ಯಗೌಡ ಹಲವರಿಗೆ ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳು ಅವರ ವಿರುದ್ಧ ದಾಖಲಾಗಿದ್ದವು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಂಸದ ಡಿ.ಕೆ. ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.