20 ವರ್ಷಗಳ ಹಿಂದೆ ಪತ್ನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗಂಗಾವತಿ ನಗರಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾನ್ವಿ ತಾಲೂಕಿನ ಆಲ್ದಾಳದ ಹನುಮಂತಪ್ಪ ಹುಸೇನಪ್ಪ(75) ಬಂಧಿತ ಆರೋಪ ಎನ್ನಲಾಗಿದೆ.
ಬಂಧಿತ ಆರೋಪಿ 2002ರಲ್ಲಿ ತನ್ನ ಮೂರನೇ ಪತ್ನಿಯನ್ನು ಕೊಲೆ ಮಾಡಿ ಕಂಪ್ಲಿ ಬಸ್ ಗೆ ಲಗೇಜ್ ಎಂದು ಚೀಲದಲ್ಲಿ ಹಾಕಿ ಕಳುಹಿಸಿದ್ದ. ಅಂದಿನಿಂದ ತಲೆ ಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು 20 ವರ್ಷಗಳಿಂದಲೂ ಹುಡುಕಾಟ ನಡೆಸುತ್ತಲೇ ಇದ್ದರು.ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮದಲ್ಲಿದ್ದ ಹನುಮಂತಪ್ಪನನ್ನು ಖಚಿತ ಮಾಹಿತಿಯ ಮೇರೆಗೆ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.