ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಅಲ್ಲದೇ, ಘಟನೆಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.
ಈ ವಿಷಯವನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ-ಶ್ರೀನಗರ ರಸ್ತೆಯ ಎಸ್ ಕೆ ಪಯೀನ್ ಹತ್ತಿರ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.