ಕಾರವಾರ: ಕಾರವಾರದಲ್ಲಿ ಮತ್ತೊಂದು ಗುಡ್ಡ ಕುಸಿತದ ದುರ್ಘಟನೆ ಸಂಭವಿಸಿದೆ.
ಕಾರವಾರದ ದೇವಿಮನೆ ಘಟ್ಟದಲ್ಲಿ (Devimane Ghat) ಮತ್ತೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರಲ್ಲಿ ಗುಡ್ಡ ಕುಸಿಯುತ್ತಿತ್ತು. ಕುಸಿದ ಗುಡ್ಡದ (Land Slide) ಮಣ್ಣು ತೆಗೆದು ಶನಿವಾರ ರಾತ್ರಿ ಲಘು ವಾಹನ ಸಂಚಾರಕ್ಕೆ ಬಿಡಲಾಗಿತ್ತು. ಇಂದು ಮತ್ತೆ ಅದೇ ಜಾಗದಲ್ಲಿ ಗುಡ್ಡ ಕುಸಿಯುತ್ತಿದೆ. ಹೆದ್ದಾರಿ ಮೇಲೆ ಕಲ್ಲು, ಮರಗಳು ಬಿದ್ದಿವೆ. ಹೀಗಾಗಿ ಕುಮಟಾ-ಶಿರಸಿಯ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.