ಚಿತ್ರದುರ್ಗ: ಸರ್ಕಾರದ ವಿರುದ್ಧ ಅವರದೇ ಪಕ್ಷದ ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈಗ ವಿಪಕ್ಷಗಳಿಗೆ ಹಬ್ಬದೂಟ ಸಿಕ್ಕಂತಾಗುತ್ತಿದೆ. ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ ನಂತರ ಈಗ ಮತ್ತೋರ್ವ ಶಾಸಕರು ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ.
ಶಾಸಕನಾಗಿ ಒಂದು ಚರಂಡಿ, ರಸ್ತೆ ಹಾಗೂ ಶಾಲೆ ನಿರ್ಮಿಸಲಾಗುತ್ತಿಲ್ಲ ಎಂದು ಮೊಳಕಾಲ್ಮೂರು (Molakalmuru) ಶಾಸಕ ಎನ್ವೈ ಗೋಪಾಲಕೃಷ್ಣ (NY Gopalakrishna) ಆಕ್ರೋಶ ಹೊರ ಹಾಕಿದ್ದಾರೆ. ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಖಾಸಗಿ ಕಂಪನಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಸಕನಾಗಿ ಒಂದು ಚರಂಡಿ, ರಸ್ತೆ, ಶಾಲೆ ನಿರ್ಮಿಸಲಾಗುತ್ತಿಲ್ಲ. ಈ ಸಂದರ್ಭದಲ್ಲೇ ಖಾಸಗಿ ಕಂಪನಿಯವರು ಏನು ಮಾಡುತ್ತಾರೋ ಎಂದು ಅಸಹಾಯಕತೆ ಹೊರ ಹಾಕಿದ್ದಾರೆ.