ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಓರ್ವ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ.
63 ವರ್ಷದ ವ್ಯಕ್ತಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಗೆ 63 ವರ್ಷದ ವ್ಯಕ್ತಿ ಮೇ 15ರಂದು ದಾಖಲಾಗಿದ್ದರು. ಅವರು ಉಸಿರಾಟದ ತೊಂದರೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು. ಆದರೆ, ವೈರಸ್ ಗೆ ಬಲಿಯಾಗಿದ್ದಾರೆ. ಆ ವ್ಯಕ್ತಿ ಮೇ 25ರಂದೇ ಸಾವನ್ನಪ್ಪಿದ್ದು, ಆರೋಗ್ಯ ಇಲಾಖೆ ಇಂದು ಅಧಿಕೃತವಾಗಿ ಘೋಷಣೆ ಮಾಡಿದೆ.
ಶುಕ್ರವಾರ ರಾಜ್ಯದಲ್ಲಿ 114 ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು 234 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಮೂವರು ಸೋಂಕಿಗೆ ಬಲಿಯಾಗಿದ್ದಾರೆ.