ಚಂದನವನದ ಖ್ಯಾತ ನಟ ಶಂಕರ್ ನಾಗ್ ಅವರ ಜಯಂತಿಯನ್ನು ಚಾಲಕರ ದಿನವನ್ನಾಗಿ ಘೋಷಿಸಬೇಕೆಂದು ಸರ್ಕಾರವನ್ನು ಆಟೋ ಡ್ರೈವರ್ಗಳು ಮನವಿ ಮಾಡಿದ್ದಾರೆ.
ಪೀಸ್ಆಟೋ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಯೂನಿಯನ್, ಕರ್ನಾಟಕ ರಾಜ್ಯ ಖಾಸಗಿ ಶಾಲಾ ವಾಹನ ಚಾಲಕರ ಯೂನಿಯನ್, ಜೈ ಭಾರತ ವಾಹನ ಚಾಲಕರ ಸಂಘ, ನೊಂದ ಚಾಲಕರ ವೇದಿಕೆ ಆಶ್ರಯದಲ್ಲಿ ಜಯನಗರದ ಶಾಲಿನಿ ಮೈದಾನದಲ್ಲಿ ನಡೆದ ಶಂಕರ್ ನಾಗ್ ವರ ಜನ್ಮದಿನದ ಪ್ರಯುಕ್ತ 11ನೇ ವರ್ಷದ ‘ಚಾಲಕರ ದಿನ ಉದ್ಘಾಟಿಸಲಾಯಿತು. ಈ ವೇಳೆ ಸಚಿವರಿಗೆ ಮನವಿ ಮಾಡಲಾಯಿತು.ಪೀಸ್ ಆಟೋ ಸಂಘಟನೆ ವತಿಯಿಂದ 3೦೦ ಮಹಿಳೆಯರಿಗೆ ಆಟೋ ಚಾಲನೆಯ ತರಬೇತಿ ನೀಡಲಾಗಿದ್ದು, ಸ್ವತಃ ಆಟೋ ಖರೀದಿಗೆ ಹಣಕಾಸಿನ ನೆರವು ಸಹ ಈ ವೇಳೆ ನೀಡಲಾಯಿತು.
ಎಕ್ಸ್ಪೊನೆಂಟ್ ಕಂಪನಿಯ 15 ನಿಮಿಷದಲ್ಲೇ ಚಾರ್ಜ್ ಆಗುವ ಚಾರ್ಜರ್ ಬಿಡುಗಡೆ ಮಾಡಲಾಯಿತು. ನಟ ಶ್ರೀ ಮುರುಳಿ, ಸಚಿವ ರಾಮಲಿಂಗಾ ರೆಡ್ಡಿ, ನಟ ಗರುಡ ರಾಮ್, ಪೀಸ್-ಆಟೋ ಅಧ್ಯಕ್ಷರು ರಘು ನಾರಾಯಣ ಗೌಡ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಯೂನಿಯನ್ ಅಧ್ಯಕ್ಷರು ಮಂಜುನಾಥ್ ಸೇರಿದಂತೆ ಹಲವರು ಇದ್ದರು.