ಬೆಳಗಾವಿ: ಆಟೋ ಬಾಡಿಗೆಯ ಹಣ ಕೇಳಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಳಗಾವಿ ನಗರದ ಬಸ್ ಸ್ಟಾಪ್ ನಿಂದ ಸಮರ್ಥ್ ನಗರ ವರೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಆಟೋದಲ್ಲಿ ಕುಳಿತು ಡ್ರಾಪ್ ನೀಡಿ ಎಂದು ಕರೆದುಕೊಂಡು ಹೋಗಿ ಪಂಡರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ತಾಫ್ ಹುಸೇನ್ ಎಂಬ ಆಟೋ ಚಾಲಕನ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ.
ನಾಲ್ಕೈದು ಜನರ ಗುಂಪು ಕಟ್ಟಿಗೆಯಿಂದ ಹಲ್ಲೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳೀಯರು ಚಾಲಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.