ಬೆಂಗಳೂರು: ಹುಡುಗಿಯ ವಿಚಾರಕ್ಕೆ ಸಂಬಂಧಿಸಿದಂತೆ ಸಿನಿಮೀಯ ರೀತಿಯಲ್ಲಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯನ್ನು ಮತ್ತೊಂದು ಗ್ಯಾಂಗ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಜ್ಞಾನಭಾರತಿ ಯೂನಿವರ್ಸಿಟಿ ಹಾಸ್ಟೆಲ್ ನಲ್ಲಿ ಈ ಘನಘೋರ ಘಟನೆ ನಡೆದಿದೆ. ಯುವತಿಯೊಂದಿಗೆ ಮಾತನಾಡುತ್ತಾನೆಂದು ವಿದ್ಯಾರ್ಥಿಯೋರ್ವನನ್ನು ಮತ್ತೊಂದು ವಿದ್ಯಾರ್ಥಿಗಳ ಗುಂಪು ಥಳಿಸಿದೆ ಎನ್ನಲಾಗಿದೆ.
ಯುವತಿಗೆ ವಿಡಿಯೋ ಕಾಲ್ ಮಾಡಿ ತೋರಿಸಿ ಹಲ್ಲೆ ಮಾಡಿದ್ದಾರೆ. ರೂಮ್ ನಲ್ಲಿ ಕೂಡಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಾಟಲ್, ಪೈಪ್, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ನಡೆಸುವುದರ ಜೊತೆಗೆ ಜೀವ ಬೆದರಿಕೆ ಹಾಕಿದ್ದಾರೆ.
ವಿದ್ಯಾರ್ಥಿ ಕೈ ಮುಗಿದು ಬೇಡಿಕೊಂಡರೂ ಕನಕಪುರ ಮೂಲದ ಸುರೇಶ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿದೆ ಎನ್ನಲಾಗಿದೆ. ಮಧುಗಿರಿ ಮೂಲದ ದರ್ಶನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಐದಾರು ಜನರು ಸೇರಿಕೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ವಿಡಿಯೋ ಕಾಲ್ ನಲ್ಲಿದ್ದ ಯುವತಿ ಇನ್ನೂ ಹೊಡಿ ಎಂದು ಕಿರುಚಾಡಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ವಿಚಾರವಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.