ಚಾಮರಾಜನಗರ: ವ್ಯಕ್ತಿಯೋರ್ವ ದೇವಸ್ಥಾನದ ಗೋಪುರ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿನ (Male Mahadeshwar hill) ಮಾದಪ್ಪನ ದೇವಸ್ಥಾನದ ಗೋಪುರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪ್ರಾಧಿಕಾರದ ಸಿಬ್ಬಂದಿ ಆ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಎಚ್.ಡಿ. ಕೋಟೆ (HD Kote) ಮೂಲದ ಮೃತ್ಯುಂಜಯ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಲು ಮುಂದಾಗಿದ್ದವನು. ಗೋಪುರದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ್ಯುಂಜಯ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.