ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಆಟೋ ಡ್ರೈವರ್ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಈ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಪ್ಲೆಕ್ಸ್ ಜಂಕ್ಷನ್ ಬಳಿ ನಡೆದಿದೆ. ಕೆಂಗೇರಿಯಿಂದ ಪೀಣ್ಯ ಕಡೆ ಬರುತ್ತಿದ್ದ ಬಸ್ ಇದಾಗಿದ್ದು ಅತಿ ವೇಗದಿಂದ ಆಟೋ ಚಾಲಕ ಡ್ರೈವ್ ಮಾಡಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ನಿಯಂತ್ರಣ ಸಿಗದೆ ಬಸ್ ಗೆ ಆಟೋ ಡಿಕ್ಕಿ ಹೊಡೆದಿದೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.