ಲಾರಿ ಹಾಗೂ ಶಾಲಾ ಬಸ್ ಮಧ್ಯೆ ಆಟೋವೊಂದು ಸಿಲುಕಿ ಅಪ್ಪಚ್ಚಿಯಾಗಿದೆ. ಆದರೆ, ಅದೃಷ್ಟವಶಾತ್ ಅದರಲ್ಲಿದ್ದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹೊಸೂರು ಮುಖ್ಯ ರಸ್ತೆಯ ಕೂಡ್ಲು ಗೇಟ್ ಬಳಿ ಈ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ಶಾಲಾ ಬಸ್ ನ ಚಾಲಕ ದಿಢೀರ್ ಎಂದು ಬ್ರೇಕ್ ಹಾಕಿದ್ದಾನೆ. ಹೀಗಾಗಿ ಅದರ ಹಿಂದೆ ಇದ್ದ ಆಟೋ ಚಾಲಕ ಕೂಡ ಬ್ರೇಕ್ ಹಾಕಿದ್ದಾನೆ. ಆ ವೇಳೆ ಆಟೋ ಹಿಂದೆ ಇದ್ದ ಲಾರಿ ಆಟೋಗೆ ಡಿಕ್ಕಿಯಾಗಿದೆ. ಈ ವೇಳೆ ಮುಂದೆ ಇದ್ದ ಬಸ್ ಹಾಗೂ ಹಿಂದೆ ಇದ್ದ ಲಾರಿ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಆಟೋದಲ್ಲಿ ಸಿಲುಕಿ ಬಾಲಕ ಅಳುತ್ತಿದ್ದ. ಆಟೋ ಚಾಲಕ ಕೂಡ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಲಾರಿ ಚಾಲಕ ರೀಲ್ಸ್ ನೋಡಿಕೊಂಡು ವಾಹನ ಚಲಾಯಿಸುತ್ತಿದ್ದರಿಂದಾಗಿ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕೂಡಲೇ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾನೆ. ಅದೃಷ್ಟವಶಾತ್ ಬಾಲಕ ಪಾರಾಗಿದ್ದು, ಆಟೋ ಚಾಲಕ ಗಾಯಗೊಂಡಿದ್ದಾರೆ.