ನೆಲಮಂಗಲ: ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯದ ಪರಿಸ್ಥಿತಿ ಬಗ್ಗೆ ಗಂಭೀರವಾದ ಬೆಳಕು ಚೆಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರೊರಂದಿಗೆ ಮಾತನಾಡಿದ ಅವರು, ಸರ್ಕಾರ ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಆದರೆ, ಅಲ್ಲಿಯೂ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹಿರಿಯ ನಾಯಕ ಬಿ.ಆರ್. ಪಾಟೀಲ್ ಅವರನ್ನು ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ದರು.
ಈಗ ಎಲ್ಲ ಯೋಜನೆಗಳನ್ನು ಮರೆತಿದ್ದಾರೆ. ಭ್ರಷ್ಟಾಚಾರ… ಭ್ರಷ್ಟಾಚಾರ… ಭ್ರಷ್ಟಾಚಾರ ಬಿಟ್ಟರೆ ಈ ಸರ್ಕಾರದಲ್ಲಿ ಯಾವುದೇ ಯೋಜನೆ ಇಲ್ಲ. ಎಲ್ಲೊ ಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರೆಪ್ಷನ್ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ. ಈ ಎಲ್ಲವನ್ನೂ ಬಿ.ಆರ್. ಪಾಟೀಲ್ ಹೇಳಿಕೆ ಪುನರುಚ್ಛರಿಸುತ್ತಿದೆ. ನಾವು ಕೂಡ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿದ್ದಾರೆ.