ಬೆಂಗಳೂರು: ಸಿಲಿಕಾನ್ ಸಿಟಿಗೆ ಮತ್ತೆ ಡೆಂಗ್ಯೂ(Dengue) ಆತಂಕ ಶುರುವಾಗಿದೆ. ಅಕಾಲಿಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ ಎಂಟ್ರಿ ಕೊಟ್ಟಿದೆ ಎನ್ನಲಾಗಿದೆ. ಕಳೆದ ಮೂರು ತಿಂಗಳಲ್ಲಿ ಸಿಲಿಕಾನ್ ಸಿಟಿಯ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ.
ಬೆಂಗಳೂರು ಅಷ್ಟೇ ಅಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲೂ ಡೆಂಗ್ಯೂ ಆತಂಕ ಶುರುವಾಗಿದೆ. ಅಕಾಲಿಕ ಮಳೆಯು ಈ ಆತಂಕ ನೀಡಿದೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗಿವೆ. ಸಾಮಾನ್ಯವಾಗಿ ಬೇಸಿಗೆ ಸಂದರ್ಭದಲ್ಲಿ ಡೆಂಗ್ಯೂ ಕಾಣಿಸಿಕೊಳ್ಳುತ್ತದೆ. ಆದರೆ, ಈ ಅಂಕಿ-ಸಂಖ್ಯೆ ಆತಂಕಕ್ಕೆ ಕಾರಣವಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಈಗ ಡೆಂಗ್ಯೂ ರೋಗಿಗಳು ದಾಖಲಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಈಡಿಸ್ ಸೊಳ್ಳೆಯಿಂದ ಈ ಡೆಂಘಿ ಕಾಣಿಸಿಕೊಳ್ಳುತ್ತದೆ. ಸೊಳ್ಳೆ ಕಚ್ಚಿದ 7 ದಿನಗಳ ನಂತರ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ವೈದ್ಯರು ಸೂಚಿಸಿದ್ದಾರೆ.