ಕೋಲಾರ: ಕೋಲಾರ ನಗರ ಸಾರಿಗೆ ಬಸ್ ಸಂಚಾರಕ್ಕೆ ಉಸ್ತುವಾರಿ ಸಚಿವ ಭೈರತಿ ಸುರೇಶ್ ಚಾಲನೆ ನೀಡಿದ್ದಾರೆ.
ಕೋಲಾರ ನಗರದ KSRTC ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಬಸ್ ಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಕೋಲಾರ ನಗರದ ವಿವಿಧೆಡೆ ನಾಲ್ಕು ನಗರ ಸಾರಿಗೆ ಬಸ್ ಗಳು ಓಡಾಟ ನಡೆಸಲಿವೆ. ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರಿಸಿ ಸಚಿವರು ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಉಸ್ತುವಾರಿ ಸಚಿವ ಭೈರತಿ ಸುರೇಶ್ ಅವರಿಗೆ ಶಾಸಕ ಕೊತ್ತೂರು ಮಂಜುನಾಥ್, ವೆಂಕಟಶಿವಾರೆಡ್ಡಿ, MLC ಅನಿಲ್ ಕುಮಾರ್, KSRTC ನಿಗಮದ ಅಧಿಕಾರಿಗಳು ಸಾಥ್ ನೀಡಿದರು.